Pages

Thursday, October 15, 2009

ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು!

ಮನೆ ಮನವ ಬೆಳಗಲು ಮತ್ತೆ ಬಂದಿದೆ ದೀಪಾವಳಿ. ಜ್ಞಾನದ ಅಂಧಕಾರ ಅಳಿಸಿ, ಅರಿವನು ಅರಳಿಸುವ ಹಣತೆಗಳು ಎಲ್ಲೆಲ್ಲೂ ಬೆಳಗಲಿ:)

ವಾರಾಂತ್ಯದಲ್ಲಿ ಬಂದಿರುವುದರಿಂದ ಗೆಳೆಯರ ಜೊತೆಗೂಡಿ ಹಬ್ಬ ಆಚರಿಸಬಹುದು. ಕಳೆದ ವರ್ಷ ನನ್ನ ಕೆಲವು ಸ್ನೇಹಿತೆಯರು ಮಾಡಿದ್ದ ಬಣ್ಣಬಣ್ಣದ ದೀಪಗಳ ಫೋಟೋ ಮತ್ತೆ ಕೆಲವು ದೀಪಾವಳಿ ಹಾಡುಗಳನ್ನು ಇಲ್ಲಿ ಹಂಚಿಕೊಂಡಿದ್ದೆ. ಈ ವರ್ಷ ನಾನೂ ಕೂಡ ಮಕ್ಕಳಾಟದ ಮಣ್ಣಿನಿಂದ(Play Dough) ಕೆಲವು ದೀಪಗಳನ್ನು ಮಾಡಿರುವೆ ನೋಡಿ!
ಹಾಗೆಯೆ, ನಿಂತು ಹೋಗಿರುವ ಹೇಮಂತರ ಬ್ಲಾಗನ್ನು ಸದ್ಯಕ್ಕೆ ನಾನೆ ಮುಂದುವರೆಸುವೆ. ಹಬ್ಬಕ್ಕೆಂದು ಅಲ್ಲೊಂದು ಲೇಖನ ಬರೆದಿರುವೆ ಓದಿ/ ನೋಡಿ ಬನ್ನಿ. Deepavali wishes on stamps

ಕೆ.ಎಸ್.ನರಸಿ೦ಹಸ್ವಾಮ ಈ ಕವನ ನಿಮ್ಮೊ೦ದಿಗೆ ಹ೦ಚಿ ಕೊಳ್ಳುವ ಆಸೆಯಾಯ್ತು.

ದೀಪಾವಳಿ


ಹೂವು ಬಳ್ಳಿಗೆ ದೀಪ
ಹಸಿರು ಬಯಲಿಗೆ ದೀಪ
ಹುಲಿಯ ಕಣ್ಣಿನ ದೀಪ ಕಾಡಿನಲ್ಲಿ !


ಮುತ್ತು ಕಡಲಿಗೆ ದೀಪ
ಹಕ್ಕಿ ಗಾಳಿಗೆ ದೀಪ
ಗ್ರಹತಾರೆಗಳ ದೀಪ ಬಾನಿನಲ್ಲಿ.

ಬಲ್ಮೆ ತೋಳಿಗೆ ದೀಪ
ದುಡಿಮೆ ಬೆವರಿನ ದೀಪ
ಸಹನೆ ಅನುಭವ ದೀಪ ಬದುಕಿನಲ್ಲಿ !

ಮುನಿಸು ಒಲವಿಗೆ ದೀಪ
ಉಣಿಸು ಒಡಲಿಗೆ ದೀಪ
ಕರುಣೆ ನ೦ದಾ ದೀಪ ಲೋಕದಲ್ಲಿ

ತೋರಣನ ತಳಿರಲ್ಲಿ
ಹೊಸಿಲ ಹಣತೆಗಳಲ್ಲಿ
ಬಾಣಬಿರು ಸುಗಳಲ್ಲಿ ನಲಿವು ಮೂಡಿ !


ಕತ್ತಲೆಯ ಪುಟಗಳಲಿ
ಬೆಳಕಿನಕ್ಷತ್ರಗಳಲಿ
ದೀಪಗಳ ಸ೦ದೇಶ ಥಳಿಥಳಿಸಲಿ.

ಬೆಳಕಿನಸ್ತಿತ್ವವನೆ
ಅಣಕಿಸುವ ಕತ್ತಲೆಗೆ
ತಕ್ಕ ಉತ್ತರವಲ್ಲಿ ಕೇಳಿಬರಲಿ !


ದೀಪಾವಳಿಯ ಜ್ಯೋತಿ
ಅಭಯ ಹಸ್ತವನೆತ್ತಿ
ಎಲ್ಲರಿಗೆ ಎಲ್ಲಕ್ಕೆ ಶುಭಕೋರಲಿ.

Wednesday, September 30, 2009

ಕರ್ಕಿಯವರ ದಿವ್ಯ ಜ್ಯೋತಿ!

ದಿವ್ಯ ಜ್ಯೋತಿ
ತಿಳಿ ನೀಲದಲ್ಲಿ ತಾ ಲೀನವಾಗಿ ಅವ ಹೋದ ದೂರ ದೂರ
ಬೆಳಗಿಹುದು ಇಲ್ಲಿ ಅವ ಬಿಟ್ಟ ಬೆಳಕು: ಇನ್ನೊಮ್ಮೆ ಏಕೆ ಬಾರ?

ಅಂದು ಸಂಜೆ ಪ್ರಾಥಱನೆಗೆ ದೇವಮಂದಿರದ ದಾರಿಯಲ್ಲಿ
ಆಚೆ ಈಚೆ ಮೊಮ್ಮಕ್ಕಳಿಬ್ಬರಲಿ ಮೈಯಭಾರ ಚೆಲ್ಲಿ
ಜಗದ ಕರುಣೆ ನಡೆವಂತೆ ನಡೆದು ಮಂದಿರದ ಪೀಠವೇರಿ
ನಿಂದನಿಲ್ಲೊ! ಜಡವುಳಿದು ಜೀವವೊಂದಾಯ್ತು ದೇವನಲ್ಲಿ.

ಎಸೆದ ಗುಂಡಿಗಾ ಕುಸಿದ ದೇಹದಲಿ ವಿಮಲ ರಕ್ತ ಚೆಲ್ಲಿ
ಮೀಯಿಸಿತ್ತು ಈ ಜಗದ ಮನವನೇ ಶೋಕ ಜಲಧಿಯಲ್ಲಿ
ಮುಗಿದ ಕೈಯು ಮುಗಿದಂತೆ ಇತ್ತು: ನೆಲಸಿತ್ತು ಕ್ಷಮೆಯು ಮೊಗದಿ
ಎದೆಯೊಳೆಂಥ ತಿಳಿಭಾವವಿತ್ತು! ಅದನಾವ ಬಲ್ಲ ಜಗದಿ?

ಹೋದ ಹೋದನವ ತ್ಯಾಗಜೀವನದ ತುತ್ತ ತುದಿಯನೇರಿ
ಏರಿ ಏರಿದೊಲು ಅಂತರಂಗದೈಸಿರಿಯ ಜಗಕೆ ತೂರಿ
ಸತ್ಯ ಪ್ರೇಮಗಳ ಸತ್ವವನ್ನೆ ಕಣ್ಣೆದುರು ಎತ್ತಿ ತೋರಿ
ಬೇರೆ ಲೋಕದನುಭಾವ ಬೀರಿ ಹೋದನಾವ ದಾರಿ?

ಎನಿತು ಸರಳ ನುಡಿ, ಎಷ್ಟು ಸಹಜ ನಡೆ ಮನದ ಮಹತಿಯೇನು!
ಅವನ ಎದೆಯ ಉನ್ನತಿಯ ನಿಲುಕುವುದು ಯಾವ ಗಿರಿಯ ಸಾನು?
ಇಹುದೆ ಅವನ ಕರುಣೆಯನು ಧರೆಗೆ ಕರೆವಂಥ ಕಾಮಧೇನು?
ಅವನು ಗೈದ ಲೀಲೆಯಲಿ ಲಯಸಿತೆಂಥವರ "ನಾನು-ನಾನು ".

ತಿಳಿದಿಹುದು ಚಿತ್ತ, ಹರಿದಿಹುದು ನೋಟ ಮೇಲಕ್ಕೆ ಬಾನಿನೆಡೆಗೆ
ಆ ಜಾಡ ಹಿಡಿದು ಇಳಿದಂತೆ ಇಹುದು ಬೆಳಕೊಂದು ಕೆಳಗೆ ಇಳೆಗೆ
"ಏನಷ್ಟು ಭ್ರಾಂತಿ? ಕಾಣದೆಯೆ ಜ್ಯೋತಿ?" ಎಂಬರುಹು ಮೂಡಲೊಡನೆ
ಬೆಳಕ ನಂಬಿ ನಿಂದಿಹನು ಧೀರ ಎದೆ ತೆರೆದು ನಾಡ ಕರೆಗೆ.
--ಡಾ ದುಂಡಪ್ಪ ಸಿದ್ಧಪ್ಪ ಕರ್ಕಿ

ಯಾವುದೇ ಕನ್ನಡ ಸಮಾರಂಭ ಸಾಮಾನ್ಯವಾಗಿ ಶುರುವಾಗುವುದು "ಹಚ್ಚೇವು ಕನ್ನಡದ ದೀಪ" ಭಾವ ಗೀತೆಯಿಂದ. ಹಾಡು ಇಲ್ಲಿ ಕೇಳಿ ಈ ಗೀತೆಯಿಂದ, ಇದರ ರಚನಕಾರ "ಡಾ ದುಂಡಪ್ಪ ಸಿದ್ಧಪ್ಪ ಕರ್ಕಿ" ಯವರು ಕನ್ನಡಿಗರ ಮನೆಮಾತಾಗಿಬಿಟ್ಟಿದ್ದಾರೆ. ಇವರ ಕವನ ಸಂಕಲನಗಳು ನಕ್ಷತ್ರ ಗಾನ, ಭಾವ ತೀರ್ಥ, ಗೀತ ಗೌರವ, ಕರಿಕೆ ಕಣಗಿಲು, ನಮನ, ತನನ ತೋಂ, ಬಣ್ಣದ ಚೆಂಡು... ನಕ್ಷತ್ರ ಗಾನ ಪ್ರಕಟವಾದ ಕರ್ಕಿಯವರ ಮೊದಲ ಕವನ ಸಂಕಲನ. ’ಹಚ್ಚೇವು ಕನ್ನಡದ ದೀಪ’ ವನ್ನು ಒಳಗೊಂಡಿರುವ ಕವನಸಂಕಲನ ಇದು. ಭಾವತೀರ್ಥ ದಲ್ಲಿ, ನಮ್ಮ ನಾಡಿನ ಕಾರಾವರ, ಗೋಕರ್ಣ, ಕೂಡಲ ಸಂಗಮ, ಜೋಗ ಇತ್ಯಾದಿ ಹಲವಾರು ಪ್ರೇಕ್ಷಣೀಯ ಸ್ಥಳಗಳ ವರ್ಣನೆಯಿದೆ. ಕರ್ಕಿಯವರು ಮಕ್ಕಳಿಗಾಗಿ ರಚಿಸಿರುವ ಬಣ್ಣದ ಚೆಂಡು (ನನ್ನ ಮಗಳ ಬ್ಲಾಗ್ ನಲ್ಲಿದೆ ಓದಿ) ಮತ್ತು ತನನ ತೋಂ ಕವನ ಸಂಕಲನಗಳು ಬಹಳ ಸರಳವಾಗಿದ್ದು, ಮಕ್ಕಳಿಗೆ ಕಲಿಸಿಕೊಡಲು ಚೆನ್ನಾಗಿವೆ. ಬೆಲ್ಲ ತಿನ್ನುವ ಮಲ್ಲ ಇತ್ಯಾದಿ ಕಥಾನಕ ಪದ್ಯಗಳಾಗಿದ್ದು ಮಕ್ಕಳಲ್ಲಿ ಆಸಕ್ತಿ ಮೂಡಿಸುವಂತವಾಗಿವೆ. ಕರ್ಕಿಯವರ "ದಿವ್ಯ ಜ್ಯೋತಿ", ಮಹಾತ್ಮ ಗಾಂಧಿಯವರು ಮರಣ ಹೊಂದಿದಾಗ ಬರೆದ ಕವನ.

ಕರ್ಕಿಯವರ ತನನ ತೋಂ ಜೊತೆಗೆ ಈ ಕವನವನ್ನು ಕಳುಹಿಸಿ ಕೊಟ್ಟ ಮಂಜುನಾಥ್ ಬೊಮ್ಮನಕಟ್ಟಿ ಅವರಿಗೆ ವಂದನೆಗಳು!!

Monday, August 31, 2009

ಓಡಿ ಬಾ ಓಡೋಡಿ ಬಾ - ಚಕ್ರತೀರ್ಥ

ಈ ಇಬ್ಬರು ಬಾಲನಟರು ಯಾರು ಗೊತ್ತಾ?

ಚಕ್ರತೀರ್ಥ (1967) -

ಸಾಹಿತ್ಯ: ಆರ್.ಎನ್.ಜಯಗೋಪಾಲ್
ಸಂಗೀತ: ಟಿ.ಜಿ.ಲಿಂಗಪ್ಪ
ಗಾಯನ: ಬಿ.ಕೆ.ಸುಮಿತ್ರ ಮತ್ತು ಬೆಂಗಳೂರು ಲತಾ.

ಝೂಟ್.......
ಹಾಹಾಹಾಹಹ ಹಾಹಾ...ಲಲಲಲಲಲಾಲಾ

ಓಡಿ ಬಾ ಓಡೋಡಿ ಬಾ ಚಿನ್ನ ನನ್ನ ಬೆನ್ನ ಹಿಂದೆ ಓಡಿ ಬಾ
ಓಡುವೇ ನಾ ಓಡುವೇ ಜಿಂಕೆ ಹಾಗೆ ಓಡೀ ನಿನ್ನಾ ಕೂಡುವೇ
ಓಡಿ ಬಾ..ಝೂಟ್...

ಮಣ್ಣಿನಿಂದ ಕಪ್ಪೆಗೂಡು ಕಟ್ಟಬಲ್ಲೆಯಾ
ಅಲ್ಲಿ ನೀನು ಕಪ್ಪೆಯೊಂದ ಸಾಕಬಲ್ಲೆಯಾ
ಕಣ್ಣು ಮುಚ್ಚಿ ನನ್ನಾ ಹಿಡಿಯಬಲ್ಲೆಯಾ
ನಾ ಹಾರೆದಂತೆ ದೂರ ನೀನು ಹಾರಬಲ್ಲೆಯಾ...ಝೂಟ್...

ನನ್ನಾ ರೀತಿ ರೆಂಬೆ ಹತ್ತಿ ನೀನು ನೋಡುವಾ
ನನ್ನಾ ಸಾಟಿ ಕುಂಟೊಬಿಲ್ಲೇ ಆಡು ನೋಡುವಾ
ಸುತ್ತಿ ಸುತ್ತಿ ಲಾಗಾ ಹಾಕು ಅಮ್ಮಯ್ಯಾ
ಈ ಕೋತಿಯಾಟ ದೊಂಬರಾಟ ಬೇಡ ದಮ್ಮಯ್ಯಾ...ಝೂಟ್...

ಕಾಗದದ ದೋಣೀಯೊಂದ ನಾವು ಮಾಡುವಾ
ನೀರಿನಲ್ಲೀ ದೋಣಿಯನ್ನು ತೇಲಿ ಬಿಡುವಾ
ಅಂಚಿನಲ್ಲಿ ನಿಂತೂ ನಾವು ನೋಡುವಾ
ಹಾಯಾಗೀ ಒಂದಾಗೀ ಇನ್ನೆಂದೂ ಬಾಳುವಾ...ಝೂಟ್...

ಓಡಿಬಾ ....ನಾ ಓಡುವೇ...ಓಡಿಬಾ...ಝೂಟ್....