Pages

Showing posts with label ಚಿತ್ರಗೀತೆ. Show all posts
Showing posts with label ಚಿತ್ರಗೀತೆ. Show all posts

Monday, August 31, 2009

ಓಡಿ ಬಾ ಓಡೋಡಿ ಬಾ - ಚಕ್ರತೀರ್ಥ

ಈ ಇಬ್ಬರು ಬಾಲನಟರು ಯಾರು ಗೊತ್ತಾ?

ಚಕ್ರತೀರ್ಥ (1967) -

ಸಾಹಿತ್ಯ: ಆರ್.ಎನ್.ಜಯಗೋಪಾಲ್
ಸಂಗೀತ: ಟಿ.ಜಿ.ಲಿಂಗಪ್ಪ
ಗಾಯನ: ಬಿ.ಕೆ.ಸುಮಿತ್ರ ಮತ್ತು ಬೆಂಗಳೂರು ಲತಾ.

ಝೂಟ್.......
ಹಾಹಾಹಾಹಹ ಹಾಹಾ...ಲಲಲಲಲಲಾಲಾ

ಓಡಿ ಬಾ ಓಡೋಡಿ ಬಾ ಚಿನ್ನ ನನ್ನ ಬೆನ್ನ ಹಿಂದೆ ಓಡಿ ಬಾ
ಓಡುವೇ ನಾ ಓಡುವೇ ಜಿಂಕೆ ಹಾಗೆ ಓಡೀ ನಿನ್ನಾ ಕೂಡುವೇ
ಓಡಿ ಬಾ..ಝೂಟ್...

ಮಣ್ಣಿನಿಂದ ಕಪ್ಪೆಗೂಡು ಕಟ್ಟಬಲ್ಲೆಯಾ
ಅಲ್ಲಿ ನೀನು ಕಪ್ಪೆಯೊಂದ ಸಾಕಬಲ್ಲೆಯಾ
ಕಣ್ಣು ಮುಚ್ಚಿ ನನ್ನಾ ಹಿಡಿಯಬಲ್ಲೆಯಾ
ನಾ ಹಾರೆದಂತೆ ದೂರ ನೀನು ಹಾರಬಲ್ಲೆಯಾ...ಝೂಟ್...

ನನ್ನಾ ರೀತಿ ರೆಂಬೆ ಹತ್ತಿ ನೀನು ನೋಡುವಾ
ನನ್ನಾ ಸಾಟಿ ಕುಂಟೊಬಿಲ್ಲೇ ಆಡು ನೋಡುವಾ
ಸುತ್ತಿ ಸುತ್ತಿ ಲಾಗಾ ಹಾಕು ಅಮ್ಮಯ್ಯಾ
ಈ ಕೋತಿಯಾಟ ದೊಂಬರಾಟ ಬೇಡ ದಮ್ಮಯ್ಯಾ...ಝೂಟ್...

ಕಾಗದದ ದೋಣೀಯೊಂದ ನಾವು ಮಾಡುವಾ
ನೀರಿನಲ್ಲೀ ದೋಣಿಯನ್ನು ತೇಲಿ ಬಿಡುವಾ
ಅಂಚಿನಲ್ಲಿ ನಿಂತೂ ನಾವು ನೋಡುವಾ
ಹಾಯಾಗೀ ಒಂದಾಗೀ ಇನ್ನೆಂದೂ ಬಾಳುವಾ...ಝೂಟ್...

ಓಡಿಬಾ ....ನಾ ಓಡುವೇ...ಓಡಿಬಾ...ಝೂಟ್....

Thursday, June 11, 2009

ಯಾವ ತಾಯಿಯು ಹಡೆದ ಮಗಳಾದರೇನು - ಬಿಳಿ ಹೆಂಡ್ತಿ

ಎಂ.ಜೆ.ಎಂ. ಪ್ರೊಡಕ್ಷನ್ಸ್ ಅವರ, ಮ.ನ.ಮೂರ್ತಿಯವರ ಕಾದಂಬರಿ ಆಧಾರಿತ ಚಿತ್ರ ’ಬಿಳಿ ಹೆಂಡ್ತಿ’ ಯಲ್ಲಿರೋ ಈ ಹಾಡು ನನ್ನ ನೆಚ್ಚಿನ ಗೀತೆಗಳಲ್ಲೊಂದು.
ಸಾಹಿತ್ಯ : ವಿಜಯನರಸಿಂಹ
ಸಂಗೀತ : ವಿಜಯಭಾಸ್ಕರ್
ಗಾಯನ : ಕಸ್ತೂರಿ ಶಂಕರ್

ಯಾವ ತಾಯಿಯು ಹಡೆದ ಮಗಳಾದರೇನು
ಕನ್ನಡಾಂಬೆಯ ಮಡಿಲ ಹೂವಾದೆ ನೀನು
ಯಾವ ತಾಯಿಯು ಹಡೆದ ಮಗಳಾದರೇನು
ಕನ್ನಡಾಂಬೆಯ ಮಡಿಲ ಹೂವಾದೆ ನೀನು
ಯಾವ ತಾಯಿಯು ಹಡೆದ ಮಗಳಾದರೇನು

ಈ ತಾಯ ಕರುಣೆಯ ತಂಪಿನಲಿ
ಈ ತಾಯ ಕಣ್ಣಿನ ಕಾಂತಿಯಲಿ
ಈ ತಾಯ ಬಂಧನದ ರಕ್ಷೆಯಲ್ಲಿ
ಈ ತಾಯ ಬಂಧನದ ರಕ್ಷೆಯಲ್ಲಿ
ಈ ಮನೆಗೆ ನೀನಾಗು ಕಲ್ಪವಲ್ಲಿ
ಯಾವ ತಾಯಿಯು ಹಡೆದ ಮಗಳಾದರೇನು

ಈ ಮನೆಯ ಭಾಗ್ಯದ ಬಾಗಿಲಲ್ಲಿ
ಈ ಮನೆಯ ಧರ್ಮದ ದೀಪದಲ್ಲಿ
ಈ ಮನೆಯ ಪ್ರೀತಿಯ ಗೀತೆಯಲ್ಲಿ
ಈ ಮನೆಯ ಪ್ರೀತಿಯ ಗೀತೆಯಲ್ಲಿ
ಈ ಮನೆಗೆ ನೀನಾಗು ಕಲ್ಪವಲ್ಲಿ
ಯಾವ ತಾಯಿಯು ಹಡೆದ ಮಗಳಾದರೇನು

ಈ ಬಾಳ ಪೂಜೆಯ ರಾಶಿಯಲ್ಲಿ
ಈ ಬಾಳ ಹಾದಿಯ ಸಂಗಮದಲ್ಲಿ
ಈ ಬಾಳ ಹಾಡಿನ ಪಲ್ಲವಿಯಲ್ಲಿ
ಈ ಮನೆಗೆ ನೀನಾಗು ಕಲ್ಪವಲ್ಲಿ
ಯಾವ ತಾಯಿಯು ಹಡೆದ ಮಗಳಾದರೇನು
ಕನ್ನಡಾಂಬೆಯ ಮಡಿಲ ಹೂವಾದೆ ನೀನು
ಯಾವ ತಾಯಿಯು ಹಡೆದ ಮಗಳಾದರೇನು


Sunday, October 26, 2008

ದೀಪಾವಳಿ ಹಾಡುಗಳು !!!

ಸಂಜೆ ದೀಪ ಹಚ್ಚುವಾಗ ಅಮ್ಮ ಹೇಳ್ತಾಯಿದ್ದ ’ರಂಜನಿ’ ರಾಗದಲ್ಲಿರುವ ಈ ಹಾಡು ನನಗೆ ಬಹಳ ಇಷ್ಟ.
ದೀಪಲಕ್ಷ್ಮಿ ದೇವಿ ಜಯ ದೀಪಲಕ್ಷ್ಮಿ
ದೀಪಲಕ್ಷ್ಮಿ ದೇವಿ ಜಯ ದೀಪಲಕ್ಷ್ಮಿ//ಪ//
ಶುಕ್ರವಾರದಲ್ಲಿ ನಿನ್ನ/ ಕೀರ್ತನೆಯಗೈವೆ
ಭಕ್ತಿಯಿಂದ ಬೇಡುವೆ ಮುಕ್ತಿ ಸಂಪದವ ನೀಡೆ //ದೀಪ//



ನಿನ್ನನ್ನೆ ಪಾಡುವೆ ನಿನ್ನನ್ನೆ ಪೊಗಳುವೆ
ನಿನ್ನ ಚರಣ್ದಲ್ಲಿ ಶಿರವನಿಟ್ಟು ನಾ ನಮಿಸುವೆ//೨//
ನಿನ್ನ ಕೃಪೆ ಕಟಾಕ್ಷವು ನನ್ನದಾಗಿ ಬೆಳಗುತಿರಲಿ//ದೀಪ//



ಅಜ್ಞಾನದ ಕತ್ತಲಲ್ಲಿ ಬಳಲಿ ಬೆಂಡಾಗಿಹೆನು
ಸುಜ್ಞಾನದ ಬೆಳಕು ನೀಡಿ ಜೀವನ ಹಸನಾಗಿಸು//೨//
ಅಭಯವ ನೀಡು ಬಾ/ ಕರುಣೆಯ ತೋರು ಬಾ
ಮನಸು/ ನಿನ್ನಲ್ಲಿ/ ನಿಲ್ಲಿಸು/ ತಾಯೇ //ದೀಪ//

ನಮ್ಮ ಕನ್ನಡ ಚಲನಚಿತ್ರಗಳಲ್ಲಿ ಕೆಲವು ದೀಪಾವಳಿ ಹಾಡುಗಳಿವೆ. ಅವುಗಳಲ್ಲಿ ಡಾ. ರಾಜ್ ಮತ್ತು ಹರಿಣಿ ಅಭಿನಯದ "ನಂದಾ ದೀಪ" ಚಿತ್ರದಲ್ಲಿರುವ "ನಾಡಿನಂದಾ ಈ ದೀಪಾವಳಿ ಬಂತು.. ...." ಹಾಡು ನನಗೆ ಬಹಳ ಇಷ್ಟ. ಅಂತರ್ಜಾಲದಲ್ಲಿ ಬಹಳಷ್ಟು ಹುಡುಕಿದರೂ ಈ ಹಾಡು ನನಗೆ ಸಿಗಲಿಲ್ಲ. ನಿಮ್ಮಲ್ಲಿ ಇದ್ದರೆ ನನಗೆ ದಯವಿಟ್ಟು ಈ-ಮೇಲ್ ಮಾಡಿ.

೨೦೦೩ರಲ್ಲಿ ಬಿಡುಗಡೆಯಾದ ’ನಂಜುಂಡಿ’ ಚಲನಚಿತ್ರದಲ್ಲಿರುವ ಈ ಅರ್ಥಪೂರ್ಣ ಹಾಡು ನೋಡಿ . ಸಾಹಿತ್ಯ ಮತ್ತು ಸಂಗೀತ ಹಂಸಲೇಖ ಅವರಿಂದ. ಹಾಡಿರುವವರು ಮಧು ಬಾಲಕೃಷ್ಣ ಮತ್ತು ನಂದಿತ್.

ದೀಪದಿಂದ ದೀಪವ

ಹಚ್ಚಬೇಕು ಮಾನವ

ಪ್ರೀತಿಯಿಂದ ಪ್ರೀತಿ ಹಂಚಲು

ಮನಸಿನಿಂದ ಮನಸನು

ಬೆಳಗಬೇಕು ಮಾನವ

ಮೇಲು ಕೀಳು ಭೇದ ನಿಲ್ಲಲು

ಭೇದವಿಲ್ಲ ಬೆಂಕಿಗೆ

ದ್ವೇಷವಿಲ್ಲ ಬೆಳಕಿಗೆ

ನೀ ತಿಳಿಯೋ ಪ

ಆಸೆ ಹಿಂದೆ ದುಃಖವೆಂದರು

ರಾತ್ರಿ ಹಿಂದೆ ಹಗಲು ಎಂದರು

ದ್ವೇಷವೆಂದು ಹೊರೆ ಎಂದರು

ಹಬ್ಬವದಕೆ ಹೆಗಲು ಎಂದರು

ಎರಡು ಮುಖದ

ನಮ್ಮ ಜನುಮದ ವೇಷಾವಳಿತಿಳಿದು

ಹಾಲ್ಬೆಳಕ ಕುಡಿವುದೇ ದೀಪಾವಳಿ ೧

ಮಣ್ಣಿನಿಂದ ಹಣತೆಯಾದರೆ

ಬೀಜದಿಂದ ಎಣ್ಣೆಯಾಯಿತು

ಅರಳೆಯಿಂದ ಬತ್ತಿಯಾದರೆ

ಸುಡುವ ಬೆಂಕಿ ಜ್ಯೋತಿಯಾಯಿತು

ನಂದಿಸುವುದು ತುಂಬ ಸುಲಭವೋ

ಹೇ ಮಾನವ

ಆನಂದಿಸುವುದು ತುಂಬ ಕಠಿಣವೋ

ಹೇ ದಾನವ೨